ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್ಎಟಿಎಫ್ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್ಎಟಿಎಫ್ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್ಎಟಿಎಫ್ ಪಾಕ್ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.
ಅಲ್ಲದೆ ಅಕ್ಟೋಬರ್ನಲ್ಲಿ ಎಫ್ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.