News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಸುದ್ದಿ

ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

47

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…