News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಕರ್ನಾಟಕ

ಆರ್‌ಟಿಇ ಅನುದಾನ ಸ್ಥಗಿತ..? ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಶಾಕ್..! ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

1608

ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ  ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ  ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

 

ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ  5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ  ರಾಜ್ಯ ಸರ್ಕಾರ ಪ್ರತಿ  ವಿದ್ಯಾರ್ಥಿಗೆ  ಒಂದು ವರ್ಷಕ್ಕೆ 16 ಸಾವಿರ ಹಣವನ್ನು  ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು  ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು  ಇದೇ  ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ  ದೇಶದ  ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು  ಸೀಟುಗಳನ್ನು  ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…