ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ..! ಇದಕ್ಕಾಗಿ 2೦೦9 ಆರ್ ಟಿ ಇ ಕಾಯ್ದೆಗೆ ಮುಂದಿನ ಅಧಿವೇಶನದಲಲ್ಲಿ ತಿದ್ದುಪಡಿ ಮಾಡಿ ವಿಧಾನ ಮಂಡಲ ಉಭಯಸದನಗಳಲ್ಲಿ ಹೊಸ ಕಾಯ್ದೆ ಮಂಡಿಸುವ ತೀರ್ಮಾನ ತೆಗೆದುಕೊಂಡಿದೆ.

ಆರ್ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ .25ರಷ್ಟು ಸೀಟುಗಳು ನೀಡಬೇಕೆಂಬ ನಿಯಮವಿದೆ. ಈ ಪ್ರಕಾರ ರಾಜ್ಯಾದ್ಯಂತ ಒಟ್ಟು 11,918 ಖಾಸಗಿ ಅನುದಾ ಶಾಲೆ ಗಳಲ್ಲಿ 5,22,೦೦೦ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಾರೆ . ಇದಕ್ಕಾಗಿ ರಾಜ್ಯ ಸರ್ಕಾರ ಪ್ರತಿ ವಿದ್ಯಾರ್ಥಿಗೆ ಒಂದು ವರ್ಷಕ್ಕೆ 16 ಸಾವಿರ ಹಣವನ್ನು ಖಾಸಗಿ ಶಾಲೆಗಳಿಗೆ ಮರು ಪಾವತಿಸಬೇಕು. ಇದರಿಂದ ವಾರ್ಷಿಕವಾಗಿ ಸರ್ಕಾರದ ಬೊಕ್ಕಸಕ್ಕೆ 850ರಿಂದ 9೦೦ ಕೋಟಿ ವೆಚ್ಚ ತಗಲುತ್ತದೆ .

ಇದೀಗ ಇಷ್ಟು ದೊಡ್ಡ ಮೊತ್ತದ ಹಣವನ್ನು ಖಾಸಗಿ ಶಾಲೆಗಳಿಗೆ ನೀಡುವ ಬದಲು ಸರ್ಕಾರಿ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿ ಮೇಲ್ದರ್ಜೆಗೇರಿಸುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಶಾಲೆಗಳು ಮೂಲಭೂತ ಸೌಕರ್ಯಗಳಿಲ್ಲದೇ ಬೀಗ ಹಾಕಿವೆ.

ಶಾಲಾ ಕೂಠಡಿ , ಶಿಕ್ಷಕರ ಕೊರತೆ, ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಕಪ್ಪು ಹಲಗೆಯ ಕೊರತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಶಾಲೆಗಳು ಬಂದ್ ಆಗಿವೆ. ಕೆಲವು ಕಡೇ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೂಂದರೆಯಾಗಬಾರದು ಎಂಬ ಕಾರಣಕ್ಕಾಗಿ ಪಕ್ಕದ ಊರಿನಲ್ಲಿರುವ ಶಾಲೆಗಳಳ್ಲಿ ವಿಲೀನ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಸರ್ಕಾರ ಪ್ರತಿ ವರ್ಷ 850ರಿಂದ 9೦೦ ಕೋಟಿ ಹಣವನ್ನು ಖರ್ಚು ಮಾಡುತ್ತಿರು ವುದರಿಂದ ಶಿಕ್ಷಣ ತಜ್ಞರು, ಸಾಹಿತಿಗಳು, ಕನ್ನಡ ಪ್ರೇಮಿಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದರು, .
ಖಾಸಗಿ ಶಾಲೆಗಳಿಗೆ ಹಣ ನೀಡುವ ಬದಲು ಇದೇ ಹಣದಲ್ಲಿ ಸರ್ಕಾರಿ ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಕಲ್ಪಿಸಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಬಹುದು ಎಂದು ಸರ್ಕಾರದ ಗಮನಕ್ಕೆ ತಂದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ಸೇಠ್ ಅನುದಾನ ಸ್ಥಗಿತಗೊಳಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದಾರೆ. ಈ ಹಿಂದೆ 2009ರಲ್ಲಿ ಅಂದಿನ ಯುಪಿಎ ಸರ್ಕಾರ ದೇಶದ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವ ಸದುದ್ದೇಶದಿಂದ ಶಿಕ್ಷಣ ಹಕ್ಕು ಕಾಯ್ದೆ ಜಾರಿ ಮಾಡಿತ್ತು. ಈ ಕಾಯ್ದೆ ಪ್ರಕಾರ ಖಾಸಗಿ ಶಾಲೆಗಳು ಒಟ್ಟು ಸಂಖ್ಯೆಯ ಶೇ.25ರಷ್ಟು ಸೀಟುಗಳನ್ನು ಬಡ ಮಕ್ಕಳಿಗೆ ಮೀಸಲಿಡಬೇಕಿತ್ತು. ಕೇಂದ್ರ ಸರ್ಕಾರದ ಈ ಕಾಯ್ದೆಯನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…