ಆರೋಗ್ಯ

ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

172

ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.

ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ :  ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು

ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.

ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.