News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

192

ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.

ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ :  ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು

ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.

ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸುದ್ದಿ

    ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

    ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ….

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…