ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…