ವಿಶೇಷ ಲೇಖನ

ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

1565

ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್‌ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.

ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ  ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

 

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.

ನರೇಂದ್ರನಿಂದ ಹಿಡಿದು ವಿವೇಕಾನಂದರವರಿಗೆ :- 

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍

ಕ್ರಿಶ್ಚಿಯನ್ನರ ನಾಡಿನಲ್ಲಿ ವಿವೇಕಾನಂದ :-

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.

ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ  ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.

ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಯೋಗಿ ಸ್ವಾಮಿ ವಿವೇಕಾನಂದರ ಮಾತುಗಳು ಎಂದೆಂದಿಗೂ ಯುವ ಪೀಳಿಗೆಗೆ ಆದರ್ಶದ ನುಡಿಮುತ್ತುಗಳು.

  • ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.
  • ಏಳಿರಿ,ಕಾರ್ಯೋನ್ಮುಖರಾಗಿರಿ ಈ ಬದುಕಾದರೂ ಎಷ್ಟು ದಿನ,ಮಾನವರಾಗಿ ಹುಟ್ಟಿದ ಮೇಲೆ ಎನನ್ನಾದರೂ ಸಾಧಿಸಿ.
  • ನಾವು ಏನನ್ನು ಮಾಡುವುದಿಲ್ಲ.ಯಾರಾದರೂ ಮಾಡಿದರೆ ಅವರಲ್ಲಿ ತಪ್ಪು ಕಂಡು ಹಿಡಿಯುತ್ತೇವೆ.ಇದು ನಮ್ಮ ಯುವಜನಾಂಗದ ಅಶಾಂತಿಗೆ ಕಾರಣ.ಅದನ್ನು ಬಿಡಿ ಎಲ್ಲರಿಗೂ ಅವಕಾಶವಿರಲಿ ಎಂಬ ಮನೋಭಾವ ತಾಳಿರಿ.
  • ನಮ್ಮ ಪ್ರಥಮ ಕರ್ತವ್ಯವೇ ನಮ್ಮಲ್ಲಿ ಆತ್ಮನಂದನೆ ಇರಕೂಡದು.ನಾವು ಬದುಕಿನಲ್ಲಿ ಮುಂದುವರಿಯಬೇಕಾದರೆ ಮೊದಲು ನಮ್ಮಲ್ಲಿ ಆತ್ಮಶೃದ್ದೆ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಸಿನಿಮಾ

    ಪಡ್ಡೆ ಹುಡುಗರ ನಿದ್ದೆ ಕದ್ದಿರೋ, ಕಣ್ ಸನ್ನೆ ನೋಟದ ಈ ಹುಡುಗಿಯ ಕತೆ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಒಂದೇ ಒಂದು ವಿಡಿಯೋ ಕ್ಲಿಪ್‌ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಂದು ವಾರಗಳ ಕಾಲ ಬೆಲ್ಲ ತಿಂದು ನೀರು ಕುಡಿದರೆ ಏನಾಗುತ್ತೆ ಗೊತ್ತಾ..?

    ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…