ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.
ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.
ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.
ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.
ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…