News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

316

ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಸಮಸ್ಯೆಗಳು ಉಪಶಮನವಾದರೂ ನೆಮ್ಮದಿ ಇರದು. ವೃತ್ತಿರಂಗದಲ್ಲಿ ಮುನ್ನಡೆಯಿಂದ ಉನ್ನತ ಸ್ಥಾನಮಾನಗಳನ್ನು ಪಡೆಯುವಿರಿ.  ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ತಕ್ಕ ಫ‌‌ಲಿತಾಂಶ ಇದೆ.

ವೃಷಭ:-

ದೈಹಿಕವಾಗಿ ಸುಧಾರಣೆ ತಂದೀತು. ಸಮಸ್ಯೆಗಳೆಲ್ಲಾ ಪರಿಹಾರವಾಗಲಿವೆ. ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ವೃತ್ತಿರಂಗದಲ್ಲಿ ಮುನ್ನಡೆ. ಸಾಮಾಜಿಕವಾಗಿ ಸ್ಥಾನಮಾನ ಗೌರವ ತಂದೀತು. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

ಮಿಥುನ:

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಬದಲಾವಣೆ ತಂದೀತು. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಫ‌ಲವನ್ನು ಪಡೆಯಲಿದ್ದಾರೆ. ದೇವತಾದರ್ಶನ ಭಾಗ್ಯದಿಂದ ಸಂತಸವನ್ನು ಅನುಭವಿಸುವಿರಿ.

ಕಟಕ :-

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಸಂತಾನ ಭಾಗ್ಯಕ್ಕೆ ಅಡೆತಡೆಗಳು ಕಂಡು ಬಂದಾವು. ಕಾರ್ಯರಂಗದಲ್ಲಿ ಸೋಲು ವಿಫ‌ಲತೆಗಳು ಕಂಡು ಬರುತ್ತವೆ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನವಿದ್ದು ಅಧಿಕ ರೂಪದಲ್ಲಿ ಧನವ್ಯಯವಾಗಲಿದೆ.

 ಸಿಂಹ:

ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಆರ್ಥಿಕವಾಗಿ ಚೇತರಿಕೆ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ದೈಹಿಕವಾಗಿ ಜಾಗ್ರತೆಯಿಂದ ಇರಬೇಕು. ದೂರ ಸಂಚಾರದಲ್ಲಿ ಗಮನ ವಿರಲಿ. ದೂರವಿರಿ. ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ಕನ್ಯಾ :-

ವಿವಿಧ ಮೂಲಗಳಿಂದ ಧನಾಗಮನ ವಿರುತ್ತದೆ. ಉದ್ಯೋಗಿಗಳಿಗೆ ಉತ್ತಮ ಮುಂಬಡ್ತಿ ಇರುತ್ತದೆ. ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ.  ಯೋಗ್ಯ ವಯಸ್ಕರ ವಿವಾಹ ಪ್ರಸ್ತಾವಗಳು ಕಂಕಣಬಲವನ್ನು ಒದಗಿಸಿ ಕೊಡುತ್ತವೆ. ದಿನಾಂತ್ಯ ಶುಭ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.

ತುಲಾ:

ಶುಭ ಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ಆಗಾಗ ಸಂಚಾರ ಒದಗಿ ಬರುತ್ತದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಅತೀ ಅಗತ್ಯವಿದೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃಶ್ಚಿಕ :-

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಸ್ವಜನರ ಕಿತಾಪತಿಯಿಂದ ಮನಸ್ಸಿಗೆ ನೆಮ್ಮದಿ ಇರದು. ಶನಿಯಿಂದ ಜಡತ್ವ, ದುರಾಲೋಚನೆಗಳು ಕಂಡು ಬರುತ್ತವೆ. ಪ್ರೇಮ ವಿವಾಹಗಳು ಯಶ ಕಾಣುವವು. ದೇವತಾರಾಧನೆಯಿಂದ ಯಶಸ್ಸು. ತಾಳ್ಮೆ, ಸಮಾಧಾನಚಿತ್ತರಾಗಿ ಮುಂದುವರಿಯಬೇಕು. ವೃತ್ತಿರಂಗದಲ್ಲಿ ಚೇತರಿಕೆ ಇರುತ್ತದೆ.

ಧನಸ್ಸು:

ಉದ್ಯೋಗಿಗಳಿಗೆ ಇನ್ನು ಉತ್ತಮ ಅವಕಾಶಗಳಿರುತ್ತವೆ. ಸದುಪಯೋಗಿಸಿಕೊಳ್ಳಿ. ಹಾಗೆ ಧನಾಗಮನ ತೃಪ್ತಿ ತರುತ್ತದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಳೇ ಮಿತ್ರರ ಸಮಾಗಮ ವಿರುತ್ತದೆ. ಹಿರಿಯ ಅಧಿಕಾರಿ ವರ್ಗದವರ ಸಹಕಾರ ಸಿಗುತ್ತದೆ.  ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಮಕರ :-

ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ.
ವೃತ್ತಿರಂಗದಲ್ಲಿ ನೆಮ್ಮದಿ ತರುತ್ತದೆ. ಚಿಂತಿತ ಕಾರ್ಯಗಳಲ್ಲಿ ಪ್ರಯತ್ನಬಲ ಅಗತ್ಯವಿದೆ. ಅವಿವಾಹಿತರಿಗೆ ಅಚ್ಚರಿಯ ರೀತಿಯಲ್ಲಿ ಕಂಕಣಬಲದ ಸಾಧ್ಯತೆ ಇರುತ್ತದೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ. ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು.  ಹಣಕಾಸಿನ ಬಗ್ಗೆ ಆದಷ್ಟು ಜಾಗ್ರತೆ ಇರಬೇಕು.

ಕುಂಭ:-

ಶುಭಮಂಗಲ ಕಾರ್ಯಗಳಿಂದ ಸಂಭ್ರಮಿಸು ವಂತಾದೀತು. ದೇಹಾರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ವೃತ್ತಿರಂಗದಲ್ಲಿ ಸಮಾಧಾನ ಸಿಗಲಿದೆ. ಆಗಾಗ ಬಂಧುಮಿತ್ರರ ಹಾಗೂ ಹಿತೈಷಿಗಳ ಆಗಮನ ವಿರುತ್ತದೆ.  ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ.

ಮೀನ:-

ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ತುಸು ಅಭಿವೃದ್ಧಿಯು ಗೋಚರಕ್ಕೆ ಬರುತ್ತದೆ. ಎಲ್ಲಾ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರವು. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು. ಬಂಧುಗಳ ಆಗಮನ ಸಾಧ್ಯತೆ. ಪ್ರಯತ್ನಬಲಕ್ಕೆ ಒತ್ತು ನೀಡಬೇಕಾಗುತ್ತದೆ. ಪತ್ನಿಗೆ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತಂದೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…