ರಾಜಕೀಯ

ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

1213

ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು,  ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್‌’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್‌ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.

 

7.30 ರ ವೇಳೆಗೆ ಕ್ಯಾಂಟೀನ್‌ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್‌ನಲ್ಲಿ  1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್‌ ಹೋಗಿರುವ ಬಗ್ಗೆ ವರದಿಯಾಗಿದೆ.

ಇಂದಿರಾ ಕ್ಯಾಂಟೀನ್‌ ತಿಂಡಿ ಬಗ್ಗೆ ಜನರ ಅಭಿಪ್ರಾಯ:-

ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.

ಇಂದಿರಾ ಕ್ಯಾಂಟೀನ್‌’ನ ಮೆನು ಹೀಗಿದೆ ನೋಡಿ:-

ಇಂದಿರಾ ಕ್ಯಾಂಟೀನ್‌ ಬೆಳಗ್ಗಿನ ಉಪಹಾರ

ಸಾಂಬಾರ್‌ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್‌, ಚಿತ್ರಾನ್ನ, ವಾಂಗಿಬಾತ್‌, ಬಿಸಿಬೇಳೆಬಾತ್‌, ಮೆಂತ್ಯೆಪಲಾವ್‌, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್‌ ನೀಡಲಾಗುತ್ತಿದೆ. ಖಾರಾಬಾತ್‌ ಮತ್ತು ಕೇಸರಿಬಾತ್‌ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.

ಮಧ್ಯಾಹ್ನದ ಹಾಗೂ ರಾತ್ರಿ ಊಟ

ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್‌, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್‌, ಖಾರಾಬಾತ್‌,

ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ? 

ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ​ಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’​ಆರಂಭಿಸಿದ್ದಾರೆ.

ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-

ನಮ್ಮ ಅಪ್ಪಾಜಿ ಕ್ಯಾಂಟೀನ್‌’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.

ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.

“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.

ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಸುದ್ದಿ

    ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

    ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…

  • ಸುದ್ದಿ

    ನಮ್ಮ ಮನೆಗಳು ಬಾಂಬ್ ದಾಳಿಯಿಂದ ಚಿಂದಿಯಾಗಿವೆ, ಆಟವಿಲ್ಲ, ಊಟವಿಲ್ಲ, ಪಾಠವಿಲ್ಲ. ಕೊನೆಗೂ ನಿದ್ರೆಯೂ ಇಲ್ಲ, ಎಲ್ಲವನ್ನೂ ಕಂಡು ಕಾಣದಂತಿರುವ ದೇಶಗಳೇ ಎಚ್ಚೆತ್ತುಕೊಳ್ಳಿ..ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್‌ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ.   ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…