News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

1223

ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು,  ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

ಬೆಂಗಳೂರು ನಗರದಾದ್ಯಂತ 101 ಇಂದಿರಾ ಕ್ಯಾಂಟೀನ್‌’ಗಳಲ್ಲಿ ಆಹಾರ ಲಭ್ಯವಾಗಿದ್ದು, 6 ಅಡುಗೆ ಮನೆಗಳಿಂದ 101 ಕ್ಯಾಂಟೀನ್‌ಗಳಿಗೆ ಆಹಾರ ಪೂರೈಕೆಮಾಡಲಾಗುತ್ತಿದೆ. ಈ ಎಲ್ಲಾ ಕ್ಯಾಂಟೀನ್‌ ಗಳಲ್ಲಿ ದಿನ ನಿತ್ಯ ಸುಮಾರು 1500 ಜನರಿಗೆ ಆಹಾರ ಒದಗಿಸಲು ಸರ್ಕಾರ ನಿರ್ಧರಿಸಿದೆ.

 

7.30 ರ ವೇಳೆಗೆ ಕ್ಯಾಂಟೀನ್‌ ತೆರೆದರೆ ಗ್ರಾಹಕರು 7 ಗಂಟೆಯ ವೇಳೆಗೆ ಆಗಮಿಸಿ ತಿಂಡಿಗಾಗಿ ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಕನಕನಪಾಳ್ಯದಲ್ಲಿರುವ ಕ್ಯಾಂಟೀನ್‌ನಲ್ಲಿ  1 ಗಂಟೆಯವೊಳಗೆ ತಿಂಡಿ ಖಾಲಿಯಾಗಿ ಕೆಲ ಗ್ರಾಹಕರು ನಿರಾಸೆಯಾಗಿ ವಾಪಾಸ್‌ ಹೋಗಿರುವ ಬಗ್ಗೆ ವರದಿಯಾಗಿದೆ.

ಇಂದಿರಾ ಕ್ಯಾಂಟೀನ್‌ ತಿಂಡಿ ಬಗ್ಗೆ ಜನರ ಅಭಿಪ್ರಾಯ:-

ತಿಂಡಿ ಸವಿದ ಗ್ರಾಹಕರು ತಿಂಡಿ ತುಂಬಾ ಚೆನ್ನಾಗಿದೆ ಆದರೆ ನೀಡುತ್ತಿರುವ ಪ್ರಮಾುಣ ಸಾಲುತ್ತಿಲ್ಲ ಎಂದಿದ್ದಾರೆ. 5 ರೂಪಾಯಿಗೆ 250 ಗ್ರಾಂ ತಿಂಡಿ ನೀಡಲಾಗುತ್ತಿದ್ದು ಇದು ಗ್ರಾಹಕರಿಕೆ ಕಡಿಮೆ ಎನಿಸಿದೆ.

ಇಂದಿರಾ ಕ್ಯಾಂಟೀನ್‌’ನ ಮೆನು ಹೀಗಿದೆ ನೋಡಿ:-

ಇಂದಿರಾ ಕ್ಯಾಂಟೀನ್‌ ಬೆಳಗ್ಗಿನ ಉಪಹಾರ

ಸಾಂಬಾರ್‌ ಹಾಗೂ ಮೊಸರನ್ನದೊಂದಿಗೆ ಕ್ರಮವಾಗಿ ಟೊಮೆಟೋಬಾತ್‌, ಚಿತ್ರಾನ್ನ, ವಾಂಗಿಬಾತ್‌, ಬಿಸಿಬೇಳೆಬಾತ್‌, ಮೆಂತ್ಯೆಪಲಾವ್‌, ಪುಳಿಯೋಗರೆ ಹಾಗೂ ದರ್ಶಿನಿ ಪಲಾವ್‌ ನೀಡಲಾಗುತ್ತಿದೆ. ಖಾರಾಬಾತ್‌ ಮತ್ತು ಕೇಸರಿಬಾತ್‌ ದೊರೆಯಲಿದೆ. ಇಡ್ಲಿಯ ಜತೆಗೆ ಕ್ರಮವಾಗಿ ಪುಳಿಯೋಗರೆ ಸಹ ಬೆಳಗ್ಗಿನ ತಿಂಡಿಯಾಗಿ ದೊರೆಯಲಿದೆ.

ಮಧ್ಯಾಹ್ನದ ಹಾಗೂ ರಾತ್ರಿ ಊಟ

ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಸಾಮಾನ್ಯವಾಗಿ ಅನ್ನವಾಂಗಿಬಾತ್‌, ಚಿತ್ರಾನ್ನ,ರವಾ ಕಿಚಡಿ, ಪೊಂಗಲ್‌, ಖಾರಾಬಾತ್‌,

ಹಾಗಾದ್ರೆ “ನಮ್ಮ ಆಪ್ಪಾಜಿ ಕ್ಯಾಂಟೀನ್” ವಿಶೇಷ ಏನು ಗೊತ್ತಾ? 

ರಾಜ್ಯ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ​ಗೆ ಸೆಡ್ಡು ಹೊಡೆಯಲ , ಜೆಡಿಎಸ್ ಮುಖಂಡ ಶಾಸಕ ಟಿ ಎ ಶರವಣ ‘ನಮ್ಮ ಅಪ್ಪಾಜಿ ಕ್ಯಾಂಟೀನ್’​ಆರಂಭಿಸಿದ್ದಾರೆ.

ನಮ್ಮ ಆಪ್ಪಾಜಿ ಕ್ಯಾಂಟೀನ್ ಮೆನು ಹೀಗಿದೆ :-

ನಮ್ಮ ಅಪ್ಪಾಜಿ ಕ್ಯಾಂಟೀನ್‌’ನಲ್ಲಿ 5 ರೂ.ಗೆ ತಟ್ಟೆ ಇಡ್ಲಿ-ವಡೆ, ಖಾರಾಬಾತ್‌, ಕೇಸರಿಬಾತ್‌, 10 ರೂ.ಗೆ ಪೊಂಗಲ್‌, ಮುದ್ದೆ ಬಸ್ಸಾರು, ಅನ್ನ ಸಾಂಬಾರ್,ರೈಸ್‌ ಬಾತ್‌, 3 ರೂ.ಗೆ ಕಾಫಿ-ಟೀ ನೀಡಲಾಗುವುದು. ಬೆಳಗ್ಗೆ 7.30 ರಿಂದ ಮಧ್ಯಾಹ್ನ 2.30ರ ತನಕ ಕ್ಯಾಂಟೀನ್ ಓಪನ್ ಇರಲಿದೆ.

ಜೆಡಿಎಸ್ ನ ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ ತಮ್ಮ ಸ್ವಂತ ಹಣದಿಂದ ‘ನಮ್ಮ ಅಪ್ಪಾಜಿ ಕ್ಯಾಂಟೀನ್’ ನನ್ನು ಮೊದಲಿಗೆ ಬೆಂಗಳೂರಿನ ಬಸವನಗುಡಿಯಲ್ಲಿ ಶುರುವಾಗಲಿದ್ದು ಬಳಿಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೂ ವಿಸ್ತರಣೆಯಾಗಲಿದೆ.

“ನಮ್ಮ ಆಪ್ಪಾಜಿ ಕ್ಯಾಂಟೀನ್” ಬಹು ಮುಖ್ಯ ವಿಶೇಷತೆ.

ಕ್ಯಾಂಟೀನ್’ಗೆ ರೈತರಿಂದ ನೇರವಾಗಿ ಆಹಾರ ಧಾನ್ಯ, ತರಕಾರಿ ಖರೀದಸಲಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading