ಕರ್ನಾಟಕ

ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

123

ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ. ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಜನತೆಗೆ ಆರೋಗ್ಯ ಸೇವೆಯಲ್ಲಿ ತೊಂದರೆಯಾಗದಂತೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ಅರೆವೈದ್ಯ ಸಿಬಂದಿ ಶುಕ್ರವಾರ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಸೂದೆಯಲ್ಲಿ ಏನಿದೆ?:-

* ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ದರವನ್ನು ಖಾಸಗಿ ಆಸ್ಪತ್ರೆಗಳು ವಿಧಿಸುವಂತಿಲ್ಲ. ದರ ಪಟ್ಟಿ ಫಲಕ ಕಡ್ಡಾಯ.

* ಹೆಚ್ಚು ಬಿಲ್ ಮಾಡಿದರೆ 25 ಸಾವಿರ ರು ಗಳಿಂದ 5 ಲಕ್ಷದ ತನಕ ದಂಡ ವಿಧಿಸಲಾಗುತ್ತದೆ.

* ನಿಯಮ ಉಲ್ಲಂಘನೆ ಮಾಡಿದರೆ 6 ತಿಂಗಳಿನಿಂದ 3 ವರ್ಷದ ತನಕ ಜೈಲು ಶಿಕ್ಷೆ ವಿಧಿಸಬಹುದು.

* ರೋಗಿ ಮೃತಪಟ್ಟರೆ ದೇಹ ಹಸ್ತಾಂತರ ಮಾಡುವ ಮುನ್ನ ಬಾಕಿ ಮೊತ್ತ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ.

* ವೈದ್ಯಕೀಯ ಸಂಸ್ಥೆಗಳು ಸಂಬಂಧಿಸಿದ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಕಡ್ಡಾಯ. ಇವೆಲ್ಲ ತಿದ್ದುಪಡಿಗೆ ಖಾಸಗಿ ಆಸ್ಪತ್ರೆ ವೈದ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಖಾಸಗಿ ಆಸ್ಪತ್ರೆಗಳು ಒಂದು ದಿನದ ಮುಷ್ಕರವನ್ನು ಹಮ್ಮಿಕೊಂಡಿದ್ದು, ಶುಕ್ರವಾರ ಬೆಳಗ್ಗೆ 8 ರಿಂದ ರಾತ್ರಿ 8 ರ ತನಕ ಸೇವೆಗಳು ಸ್ಥಗಿತಗೊಂಡಿವೆ. ಕೆಲವೆಡೆ ನಾಳೆ ಬೆಳಗ್ಗೆ 8ರ ತನಕ ಸೇವೆಗಳು ಇರುವುದಿಲ್ಲ.
ಕರ್ನಾಟಕದಲ್ಲಿ ಶೇ 70ರಷ್ಟು ಹೊರರೋಗಿಗಳ ಪ್ರಕರಣಗಳನ್ನು ಖಾಸಗಿ ಆಸ್ಪತ್ರೆಗಳು ನಿರ್ವಹಿಸುತ್ತಿವೆ. ತುರ್ತು ಸೇವೆಗಳನ್ನು ಹೊರತು ಪಡಿಸಿ ಉಳಿದ ಸೇವೆಗಳನ್ನು ಸ್ಥಗಿತಗೊಳಿಸಲಾಗಿವೆ.

ಬೇಡಿಕೆಗೆ ಸರ್ಕಾರ ಬಗ್ಗದಿದ್ದರೆ, ವೃತ್ತಿ ತೊರೆಯುವ ಬೆದರಿಕೆ:-

ಕರ್ನಾಟಕ ಸರ್ಕಾರ ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017’ನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ, ಬೇಡಿಕೆಗಳು ಈಡೇರದಿದ್ದರೆ ವೃತ್ತಿಯನ್ನು ತೊರೆಯುವುದಾಗಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಈ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು? ವೈದ್ಯರ ಬೇಡಿಕೆಗಳೇನು?

ವೈದ್ಯಕೀಯ ಸಂಸ್ಥೆಗಳ ಬೆಂಬಲ :-

ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ದಂತ ವೈದ್ಯರ ಒಕ್ಕೂಟ, ಪ್ರಯೋಗಾಲಯಗಳು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ಒಕ್ಕೂಟ, ವಿವಿಧ ತಜ್ಞ ವೈದ್ಯರ ಸಂಘಟನೆಗಳು, ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್, ರಕ್ತನಿಧಿಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ, ಒಳ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಆದರೆ, ಹೊರರೋಗಿಗಳ ವಿಭಾಗ, ತಜ್ಞ ವೈದ್ಯರೊಡನೆ ಸಂದರ್ಶನ ಇಂದು ಸಾಧ್ಯವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.