ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

391

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.