ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.

ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.

ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗೂ ಹಾರ್ಟ್ ಅಟ್ಯಾಕ್ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.