ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.
ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.
ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.
ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್ಗಳ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ತೆಲುಗು ಚಿತ್ರರಂಗದ ವಿವಾಧಾತ್ಮಕ ನಟಿ ಶ್ರೀರೆಡ್ಡಿ ಕಲಾವಿದರ ಸಂಘದ ಕಟ್ಟಡದ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದಾರೆ. ಯಾರು ಈ ಶ್ರೀರೆಡ್ಡಿ..? ಕೆಲವು ದಿನಗಳ ಹಿಂದಯೇ ಈ ನಟಿ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದು ಏಕೆ..? ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ…
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…