News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Animals, India, National, tourism

ಇದು ಒಂಟೆಗಳ ಜಾತ್ರೆ !

758

ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ

ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.


ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.


ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.

ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.

ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್‌ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.



ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್‌ ಸುತ್ತಮುತ್ತಲಿರುವ ಹೋಟೆಲ್‌ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್‌ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್‌ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.

ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.




ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.

ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ

ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…