India, tourism

ಇದು ಭಗವಾನ ಶ್ರೀಕೃಷ್ಣನ ನಗರಿ

46

ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.

ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.



ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.


ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.


ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.

ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…