India, tourism

ಇದು ಭಗವಾನ ಶ್ರೀಕೃಷ್ಣನ ನಗರಿ

46

ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.

ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.



ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.


ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.


ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.

ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸಿನಿಮಾ

    ಸರಿಗಮಪ ಸೀಸನ್ 13 ರ ತೀರ್ಪಿನಲ್ಲಿ ಮೋಸ ಆಗಿದೆಯಾ!ಹಾಗಾದ್ರೆ ಈ ಲೇಖನಿ ಓದಿದ್ರೆ ನಿಜವಾದ ವಿನ್ನರ್ ಯಾರೆಂದು ತಿಳಿಯುತ್ತೆ?

    ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
    ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…