ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…