ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ.
ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ ಸ್ಥಿತವಿದೆ. ಅರಬ್ಬಿ ಸಮುದ್ರ ಪ್ರವೇಶದ್ವಾರ ಎಂದೇ ಹೇಳಲಾಗುವ ಗಲ್ಫ್ ಆಫ್ ಕಚ್ ನಲ್ಲಿ ಈ ದ್ವೀಪವಿದೆ.

ಪುರಾತತ್ವ ಇಲಾಖೆಯು ನಡೆಸಿದ ಅಧ್ಯಯನದ ಪ್ರಕಾರ, ಹರಪ್ಪ ನಾಗರಿಕತೆಯ ನಂತರದಲ್ಲಿ ಇಲ್ಲಿ ನಾಗರಿಕ ಪ್ರದೇಶ ಅಭಿವೃದ್ಧಿಯಾಗಿತ್ತೆಂದು ಹೇಳಲಾಗಿದೆ. ಅಲ್ಲದೆ ಮಹಾಭಾರತದ ಸಭಾಪರ್ವದಲ್ಲಿ ಉಲ್ಲೇಖಿಸಲಾದ ಅಂತರ್ದ್ವೀಪವು ಇದೆ ದ್ವಾರಕಾ ಎಂದು ಗುಜರಾತಿ ವಿದ್ವಾಂಸ ಉಮಾಶಂಕರ ಜೋಷಿಯವರ ಅಭಿಪ್ರಾಯವಾಗಿದೆ. ಇದರಲ್ಲಿ ದ್ವಾರಕೆಯ ರಾಜನು ದೋಣಿಯ ಮೂಲಕ ಇಲ್ಲಿಗೆ ತೆರಳುತ್ತಿದ್ದನೆಂಬ ವಿಷಯವಿದೆ.

ಅಲ್ಲದೆ ಶ್ರೀಕೃಷ್ಣನು ರಾಧೆಯ ಜೊತೆ ಹೆಚ್ಚು ಕಾಲ ಈ ಸುಂದರವಾದ ಸ್ಥಳದಲ್ಲಿ ಕಳೆದಿದ್ದನೆಂಬ ಪ್ರತೀತಿಯಿದೆ. ಬೇಸಿಗೆಯ ಸುಡು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಶ್ರೀಕೃಷ್ಣನು ಆಗಾಗ ಇಲ್ಲಿಗೆ ಬರುತ್ತಿದ್ದನೆಂದು ಸ್ಥಳ ಪುರಾಣದ ಪ್ರಕಾರ ತಿಳಿದು ಬರುತ್ತದೆ. ಇದೊಂದು ಆಕರ್ಷಕ ಪ್ರವಾಸಿ ತಾಣವಾಗಿದ್ದು ಆಂಜನೇಯ, ಹಾಗೂ ಕೃಷ್ಣನ ದೇವಾಲಯಗಳನ್ನು ಇಲ್ಲಿ ಕಾಣಬಹುದು. ಅಲ್ಲದೆ ಒಂದು ಗುರುದ್ವಾರವೂ ಸಹ ಇಲ್ಲಿದೆ.
ಇಲ್ಲಿರುವ ಕೃಷ್ಣನ ದೇವಾಲಯ 500 ವರ್ಷಗಳಷ್ಟು ಪುರಾತನವಾದುದೆಂದು ಹೇಳಲಾಗುತ್ತದೆ ಹಾಗೂ ಪದ್ಧತಿಯಂತೆ ಇಂದಿಗೂ ಇಲ್ಲಿಗೆ ಭೇಟಿ ನೀಡುವ ಭಕ್ತರು ಬ್ರಾಹ್ಮಣರಿಗೆ ಅಕ್ಕಿಯನ್ನು ದಾನವನ್ನಾಗಿ ನಿಡುತ್ತಾರೆ. ಆಂಜನೇಯನ ದೇವಾಲಯ ಸಾಕಷ್ಟು ವಿಶಿಷ್ಟವಾಗಿದೆ ಕಾರಣ ಆಂಜನೇಯನ ಜೋತೆ ಅವನ ಮಗನಾದ ಮಕರಧ್ವಜನ ವಿಗ್ರಹವು ಇಲ್ಲಿರುವುದರಿಂದ.

ಇನ್ನೂ ಪ್ರಾಕೃತಿಕವಾಗಿ ಹೇಳಬೇಕೆಂದರೆ ಈ ನಡುಗಡ್ಡೆಯು ಶಾಂತ ಪರಿಸರವನ್ನು ಹೊಂದಿದ್ದು ಎಲ್ಲೆಡೆ ವಿಶಾಲವಾದ ನೀಳ ವರ್ಣದ ಸಮುದ್ರ ನೀರಿನಿಂದ ಅದ್ಭುತವಾಗಿ ಗೋಚರಿಸುತ್ತದೆ. ಓಖಾ ಇಲ್ಲಿಗೆ ತೆರಳಲು ಹತ್ತಿರದ ಭಾರತ ಮುಖ್ಯ ಭೂಮಿಯ ಕರಾವಳಿ ಗ್ರಾಮವಾಗಿದ್ದು ಇಲ್ಲಿಂದ ದೋಣಿಯ ಮೂಲಕವೆ ಸಾಗಿ ಬೇಟ್ ದ್ವಾರಕಾವನ್ನು ಪ್ರವೇಶಿಸಬಹುದು.

ಹೀಗೆ ಸಮುದ್ರದಲ್ಲಿ ಸಾಗುವಾಗ ವಿನೂತನ ರೀತಿಯ ಅನುಭವವನ್ನು ನೀವು ಪಡೆಯಬಹುದು. ವಿವಿಧ ಸಮುದ್ರ ಪಕ್ಷಿಗಳ ವೀಕ್ಷಣೆ ಮಾಡಬಹುದು. ಇನ್ನೊಂದು ಸಂಗತಿಯೆಂದರೆ ಸಾಮಾನ್ಯವಾಗಿ ದ್ವಾರಕೆಗೆ ಭೆಟಿ ನೀಡುವ ಪ್ರವಾಸಿಗರು ದ್ವಾರಕೆಯಿಂದ 32 ಕಿ.ಮೀ ದೂರದಲ್ಲಿರುವ ಬೇಟ್ ದ್ವಾರಕೆಗೆ ಭೇಟಿ ನೀಡದೆ ಮರಳುವುದು ಬಲು ವಿರಳ.
ಬೇಟ್ ದ್ವಾರಕೆಯಲ್ಲಿ ಹಿಂದೆ ಭಾರತೀಯ ಪುರಾತತ್ವ ಇಲಾಖೆ ಉತ್ಖನನ ಮಾಡಿದಾಗ ಇಲ್ಲಿ ಹಲವಾರು ಶಾಸನಗಳು ದೊರೆತಿದ್ದು ಅವುಗಳ ಪ್ರಕಾರವಾಗಿ ಶ್ರೀಕೃಷ್ಣನ ಮೂಲ ಸ್ಥಳ ಇದಾಗಿತ್ತೆಂದು ತಿಳಿದುಬರುತ್ತದೆ. ಹಾಗಾಗಿ ದ್ವಾರಕೆಗೆ ಬರುವ ಕೃಷ್ಣ ಭಕ್ತರು ಬೇಟ್ ದ್ವಾರಕೆಗೂ ಸಹ ಭೇಟಿ ನೀಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್ಗಳನ್ನೂ ಫಾಸ್ಟ್ಟ್ಯಾಗ್ ಲೇನ್ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್ ಟ್ಯಾಗ್ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.