ದೇಶ-ವಿದೇಶ

ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

3940

ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು  ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್‌ನ್ನು ನೋಡುವಿರಿ.

ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-

ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.

1990ರಿಂದಲೂ  ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!

ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್‌ನ ಬಾವುಟ ಕೂಡಾ ಕಂಡುಬರುತ್ತದೆ.

ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.

ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:

ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್‌ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ