News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

2120

ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.

ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!

ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.

ಭಗವಾನ್ ಶಿವನಿಂದ ಪಡೆದ ಶಾಪ:-

ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.

ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಆಧ್ಯಾತ್ಮ

    ಧ್ಯಾನ ಮಾಡೋದ್ರಿಂದ ಏನೆಲ್ಲಾ ಚಮತ್ಕಾರ ಆಗುತ್ತೆ ಗೊತ್ತಾ!ಹಾಗಾದ್ರೆ ಧ್ಯಾನ ಹೇಗೆ ಮಾಡಬೇಕು,ಹೇಗೆ ಮಾಡಬಾರದು?ತಿಳಿಯಲು ಈ ಲೇಖನಿ ಓದಿ…

    ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.