ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.
ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!
ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..