ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.
ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!
ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…