ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…