ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್ಶುಲ್ ಮೆರ್ಸಾಂಟೈಲ್, ಎವರ್ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…