ದೇವರು-ಧರ್ಮ

ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

1351

ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಏನಿದು ವೈಕುಂಠ ಏಕಾದಶಿ..?

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ…

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಏಕಾದಶಿ ಆಚರಣೆ ಮಾಡುವುದು ಹೇಗೆ..?

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಭಗವಂತನ ದರ್ಶನ ಮಾಡುವುದು ಹೇಗೆ..?

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.

ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.

ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ಮುಕ್ಕೋಟಿ ದ್ವಾದಶಿ ಅಂದರೇನು..?

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…