ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…