ಸರ್ಕಾರಿ ಯೋಜನೆಗಳು

ಇನ್ನು ಮುಂದೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಇಂಟರ್ನೆಟ್ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

141

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಪ್ರಮುಖ ಬಸ್‌ ನಿಲ್ದಾಣಗಳು ಮತ್ತು 350 ಹವಾನಿಯಂತ್ರಿತ ವೋಲ್ವೊ ಬಸ್‌ಗಳಲ್ಲಿ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಆ ಮೂಲಕ ಪ್ರಯಾಣಿಕರನ್ನು ತನ್ನತ್ತ ಆಕರ್ಷಿಸಲು ಕಸರತ್ತು ನಡೆಸುತ್ತಿದೆ.

 

ಡಿಜಿಟಲ್‌ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್‌ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್‌ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.

 

ಉಚಿತ ಅಂತರ್ಜಾಲ ಸೇವೆ ಮತ್ತು ಆಕರ್ಷಕ ಪ್ರಯಾಣ ದರಕ್ಕೆ ಮಾರು ಹೋಗಿರುವ ಐಟಿ-ಬಿಟಿ ಉದ್ಯೋಗಿಗಳು ವೋಲ್ವೊ ಬಸ್‌ಗಳನ್ನು ಬಿಟ್ಟು, ಟ್ಯಾಕ್ಸಿ ಏರುತ್ತಿದ್ದಾರೆ. ಪರಿಣಾಮ, ವೋಲ್ವೊ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಸಂಸ್ಥೆಯು ನಷ್ಟ ಅನುಭವಿಸುವಂತಾಗಿದೆ.

 

350 ಬಸ್‌ಗಳಲ್ಲಿ ವೈಫೈ ಸೇವೆ:-

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿರುವ 75 ವಾಯುವಜ್ರ ಬಸ್‌ಗಳೂ ಸೇರಿದಂತೆ ಐಟಿ ಕಾರಿಡಾರ್‌ಗಳಿಗೆ ಸಂಚರಿಸುವ 350 ವೋಲ್ವೊ ಬಸ್‌ಗಳಲ್ಲಿ ವೈಫೈ ಸೇವೆ ಒದಗಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 200 ಬಸ್‌ಗಳಲ್ಲಿ ವೈಫೈ ಸೌಲಭ್ಯ ಅಳವಡಿಸಲು ಅನುಮತಿ ನೀಡಲಾಗಿದೆ.

 

12 ನಿಲ್ದಾಣಗಳಲ್ಲಿ ವೈಫೈ ಜಾಲ:-

ನಗರದ ಕೆಂಪೇಗೌಡ ಬಸ್‌ ನಿಲ್ದಾಣ, ಶಿವಾಜಿನಗರ, ಶಾಂತಿನಗರ, ಕೆಂಗೇರಿ, ವೈಟ್‌ಫೀಲ್ಡ್‌, ಬನಶಂಕರಿ, ಜಯನಗರ, ಬನ್ನೇರುಘಟ್ಟ, ವಿಜಯನಗರ, ದೊಮ್ಮಲೂರು, ಯಲಹಂಕ, ಯಶವಂತಪುರ ನಿಲ್ದಾಣಗಳು ವೈಫೈ ಸೇವಾ ಜಾಲವನ್ನು ಹೊಂದಿರಲಿವೆ. ವೈಫೈ ಅಳವಡಿಕೆಗೆ ಖಾಸಗಿ ಸಂಸ್ಥೆಯೊಂದಕ್ಕೆ ಐದು ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಮುಂದಿನ 15-20 ದಿನಗಳಲ್ಲಿ ಪ್ರಯಾಣಿಕರಿಗೆ ವೈಫೈ ಸೌಲಭ್ಯ ಸಿಗಲಿದೆ.

30 ಎಂಬಿ ಬಳಕೆಗೆ ಅವಕಾಶ:-

ವೋಲ್ವೊ ಬಸ್‌ಗಳು ಮತ್ತು ನಿಲ್ದಾಣಗಳಲ್ಲಿ ಲಭಿಸುವ ವೈಫೈ ಮೂಲಕ ಅಂತರ್ಜಾಲದ ಸಂಪರ್ಕ ಪಡೆದು, 30 ಎಂಬಿ ಯಷ್ಟು ಡಾಟಾ ಬಳಕೆ ಮಾಡಲು ಅವಕಾಶ ನೀಡಲಾಗುತ್ತಿದೆ. ಇದಕ್ಕೆ ಸಮಯದ ಮಿತಿ ಇರುವುದಿಲ್ಲ. 30 ಎಂಬಿ ಮಿತಿ ದಾಟಿದಾಕ್ಷಣ ಸಂಪರ್ಕ ಕಡಿತಗೊಳ್ಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.

  • ಸುದ್ದಿ

    ಅಂತಿಮವಾಗಿ ಚೈತ್ರಾ ಕೊಟ್ಟೂರು ಮನೆಯಿಂದ ಹೊರಗೆ ಬರುವಾಗ ಸಿನಿಮಾ ಶಾಕ್ ಕೊಟ್ಟೆ ಬಂದ್ರು!ಏನದು ಗೊತ್ತಾ.?

    ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್  ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ತಂತ್ರಜ್ಞಾನ

    ಇನ್ನು 6 ತಿಂಗಳಲ್ಲಿ ನಿಮ್ಮ ಹಣವನ್ನು ವಾಟ್ಸಪ್ ಮಾಡಬಹುದು..!ತಿಳಿಯಲು ಈ ಲೇಖನ ಓದಿ…

    ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…