ಗ್ಯಾಜೆಟ್

ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

374

ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ “ಇನ್‌ಮಾರ್‌ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್‌ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್‌ಮಾರ್‌ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.

ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.

ವಾಯ್ಸ್ ಮತ್ತು ಎಸ್‌ಎಂಎಸ್ ಮಾತ್ರ ಸಾಧ್ಯ:-  ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್‌ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.

ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್‌ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.

ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್‌ ಫೋನ್‌ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.

ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್‌ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.

ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್‌ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಗಂಡನಂತೆ ಬಟ್ಟೆ ಧರಿಸಿ ಟ್ರೋಲ್ ಆದ ದೀಪಿಕಾ ಪಡುಕೋಣೆ…..

    ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್‍ವೀರ್ ಸಿಂಗ್‍ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್‍ವೀರ್ ಸಿಂಗ್‍ರನ್ನು ಭೇಟಿ ಆಗಲು ಲಂಡನ್‍ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್‍ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….