ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ “ಇನ್ಮಾರ್ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್ಮಾರ್ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.
ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!
ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.
ವಾಯ್ಸ್ ಮತ್ತು ಎಸ್ಎಂಎಸ್ ಮಾತ್ರ ಸಾಧ್ಯ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.
ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.
ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್ ಫೋನ್ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.
ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.
ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಬಳ್ಳಾಪುರ/ಬೆಂಗಳೂರು: ಮನೆ ಮಾಲೀಕರು ಮತ್ತು ಪೊಲೀಸರ ಕಿರುಕುಳದಿಂದ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮಂಜುಳಾ (35) ನೇಣಿಗೆ ಶರಣಾದ ಮಹಿಳೆ. ದೇವನಹಳ್ಳಿ ಪಟ್ಟಣದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮೊದಲು ಮಂಜುಳಾ ಮೊಬೈಲ್ನಲ್ಲಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಬಾಡಿಗೆ ಮನೆ ವಿಚಾರವಾಗಿ ಮಾಲೀಕರು ಮತ್ತು ಮಂಜುಳಾ ನಡುವೆ ಜಗಳ ನಡೆದಿತ್ತು. ಜಗಳದ ಹಿನ್ನೆಲೆಯಲ್ಲಿ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು….
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…