ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.