ಆಧ್ಯಾತ್ಮ, ದೇವರು, ದೇವರು-ಧರ್ಮ

ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1664

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.

ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನ‌ಪ್ರಾಣ ಹೋಗುವುದೆಂದು ತಿಳಿಯಿತು.

ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇಲ್ಲಿ ಓದಿ:62ಅಡಿ ಉದ್ದದ ಹನುಮಂತನ ಬೃಹತ್ ಏಕಾಶಿಲಾವಿಗ್ರಹ ಬಂದಿದ್ದು ಎಲ್ಲಿಂದ.?ಶಿಲ್ಪಿ ಯಾರು.?ಆ ಶಿಲೆ ಸಿಕ್ಕಿದ್ದು ಹೇಗೆ.!ಇಲ್ಲಿದೆ ಸಂಪೂರ್ಣ ಮಾಹಿತಿ…

ಈ ಪಂಚಮುಖಿ ಆಂಜನೇಯನ ಐದು ಮುಖಗಳು ಮತ್ತು ಅವುಗಳ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ…

ಹನುಮಂತ:

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.

ನರಸಿಂಹ:

ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಗರುಡ:

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.

ಇಲ್ಲಿ ಓದಿ:ಶನಿ ದೇವರ ಕಾಟದಿಂದ ಪಾರಾಗಲು ಅಂಜನೇಯ ಸ್ವಾಮಿಯನ್ನು ಪೂಜಿಸುವುದು ಹೇಗೆ..?

ವರಾಹ:

ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಹಯಗ್ರೀವ:

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.

ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.