ಆಧ್ಯಾತ್ಮ, ದೇವರು, ದೇವರು-ಧರ್ಮ

ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1660

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.

ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನ‌ಪ್ರಾಣ ಹೋಗುವುದೆಂದು ತಿಳಿಯಿತು.

ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇಲ್ಲಿ ಓದಿ:62ಅಡಿ ಉದ್ದದ ಹನುಮಂತನ ಬೃಹತ್ ಏಕಾಶಿಲಾವಿಗ್ರಹ ಬಂದಿದ್ದು ಎಲ್ಲಿಂದ.?ಶಿಲ್ಪಿ ಯಾರು.?ಆ ಶಿಲೆ ಸಿಕ್ಕಿದ್ದು ಹೇಗೆ.!ಇಲ್ಲಿದೆ ಸಂಪೂರ್ಣ ಮಾಹಿತಿ…

ಈ ಪಂಚಮುಖಿ ಆಂಜನೇಯನ ಐದು ಮುಖಗಳು ಮತ್ತು ಅವುಗಳ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ…

ಹನುಮಂತ:

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.

ನರಸಿಂಹ:

ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಗರುಡ:

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.

ಇಲ್ಲಿ ಓದಿ:ಶನಿ ದೇವರ ಕಾಟದಿಂದ ಪಾರಾಗಲು ಅಂಜನೇಯ ಸ್ವಾಮಿಯನ್ನು ಪೂಜಿಸುವುದು ಹೇಗೆ..?

ವರಾಹ:

ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಹಯಗ್ರೀವ:

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.

ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಸುದ್ದಿ

    ಹಳಿಗಳಲ್ಲಿ ಇನ್ಮುಂದೆ ಕಂಪನಿ ರೈಲು ಸಂಚಾರ…!

    ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್‌ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್‌ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದ‌ಕ್ಕೂ ಮುನ್ನ…

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.