ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
![]()
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…