ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

608

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • Health

    ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…