ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

601

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ತಂತ್ರಜ್ಞಾನ

    ಕಂಪನಿಗಳಲ್ಲಿ ನಿರುದ್ಯೋಗಿಗಳ ಇಂಟರ್ವ್ಯೂ ಪಡೆಯುತ್ತೆ ಈ ರೋಬೋಟ್..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…