News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

611

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.