ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.
ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್ನಲ್ಲಿರಿಸಿ ಐಸ್ ಕ್ಯೂಬ್ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆರಸದಲ್ಲಿ ಸಿಟ್ರಿಕ್ ಆಮ್ಲದ ಜೊತೆ ಆ್ಯಸ್ಕೂರ್ಬಿಕ್ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.
ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್ಪೇಸ್ಟ್ನ ಬಿಳಿಭಾಗದಲ್ಲಿ ಬೇಕಿಂಗ್ ಸೋಡಾ ಹಾಗೂ ಹೈಡ್ರೋಜನ್ ಪೆರಾಕ್ಸೆ„ಡ್ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್ಪೇಸ್ಟ್ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.