ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

1021

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • ಗ್ಯಾಜೆಟ್

    ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

    ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ. ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…