ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…