ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…