ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

1009

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…