News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

1026

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

  • India, Sports, ಕ್ರೀಡೆ

    2 ನೇ ಟೆಸ್ಟ್ ಸೋತ ಭಾರತ ತಂಡ

    ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್‌ಗಳೊಂದಿಗೆ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್‌ನಲ್ಲಿ ಅಂತಿಮ ಟೆಸ್ಟ್‌ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್‌ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ