ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…