ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆಂಬ ವದಂತಿ ಇಂದು ಬೆಳಗಿನಿಂದಲೂ ಹರಿದಾಡುತ್ತಿದ್ದು, ಇದೀಗ ಬಂದ ಮಾಹಿತಿಯಂತೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಖಚಿತವಾಗಿದೆ. ಐಜಿ-ಡಿಜಿಪಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿರುವ ಅಣ್ಣಾಮಲೈ, ಕಳೆದ ತಮ್ಮ ಹತ್ತು ವರ್ಷಗಳ ಸೇವಾವಧಿಯಲ್ಲಿ ಕುಟುಂಬದ ಜೊತೆಗೆ ಕಾಲ ಕಳೆಯಲು ಸಾಧ್ಯವಾಗದ ಕಾರಣ, ತಮ್ಮ ರಾಜೀನಾಮೆ ಸ್ವೀಕೃತಗೊಂಡ ಬಳಿಕ ಕುಟುಂಬ ಸದಸ್ಯರೊಂದಿಗೆ ಇರಲಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಣ್ಣಾಮಲೈ ರಾಜಕೀಯ…
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.