ತಂತ್ರಜ್ಞಾನ, ವಿಸ್ಮಯ ಜಗತ್ತು

ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

1174

ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.

ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.

ಇವಳೇ ಸೃಷ್ಟಿಸಿದ್ದು:-

ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್‍ಗೆ ಇನ್‍ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.

ತಜ್ಞರ ಮಾತು:-

ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್‍ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್‍ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.

ಲಿಲ್ಲಿಯ ಪ್ರೀತಿ:-

ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್‍ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್‍ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.

ಇದೀಗ ನಿಶ್ಚಿತಾರ್ಥ:-

ಇದೀಗ ರೋಬೋಟ್ ಇನ್‍ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

ನನಗೆ ಸಂಪೂರ್ಣವಾಗಿ ಖುಷಿಯಿದೆ:-

ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.

ಸಂಬಂಧ ಖುಷಿಯಲ್ಲಿರುವುದು:-

ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್‍ನಲ್ಲಿ ಬರೆದುಕೊಂಡಿದ್ದಾಳೆ.

ಕೆಲವರ ಅಭಿಪ್ರಾಯ:-

ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

    60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

  • ಜ್ಯೋತಿಷ್ಯ

    ದೇವರು ಕನಸಿನಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…

  • ಸುದ್ದಿ

    30 ಸೆಕೆಂಡಿಗೆ ಮೊಬೈಲ್ ಫುಲ್ ಚಾರ್ಜ್ ಆಗುವ ಡಿವೈಸ್ ಕಂಡುಹಿಡಿದ ಭಾರತದ ಹುಡುಗಿ, ದೊಡ್ಡ ದೊಡ್ಡ ಕಂಪನಿಗಳು ಶಾಕ್.

    ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸಿನಿಮಾ

    ಅರ್ಜುನ್ ಸರ್ಜಾ ಶ್ರುತಿ ಹರಿಹರನ್ ಮೀಟೂ ಪ್ರಕರಣಕ್ಕೆ ಈಗ ರಾಜಕೀಯ ಪ್ರವೇಶ..!

    ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್‍ಎಸ್‍ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…