ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.
ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.
ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.
ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.
ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.
ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…
ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….