ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…
* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು